Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580. Qries Qries Qries Qries Qries

"ಆರಾಟ" ಕನ್ನಡ ಸಿನಿಮಾ ಕಾಸರಗೋಡಿನ ಕೃಷ್ಣದಲ್ಲಿ ಹಾಗೂ ಮಂಗಳೂರಿನಲ್ಲಿ ಭರ್ಜರಿ ಪ್ರದರ್ಶನ.

"ಆರಾಟ" ಕನ್ನಡ ಸಿನಿಮಾ ಜಾಸರಗೋಡಿನ ಕೃಷ್ಣದಲ್ಲಿ ಭರ್ಜರಿ ಪ್ರದರ್ಶನ.
ಕಾಸರಗೋಡು: ಪಿಎನ್ ಆರ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ ಪುಷ್ಪರಾಜ್ ರೈ ಮಲಾರ ಬೀಡು ನಿರ್ದೇಶನದ "ಆರಾಟ" ಕನ್ನಡ ಸಿನಿಮಾ ಕರಾವಳಿ ಜಿಲ್ಲೆಯಾದ್ಯಂತ ತೆರೆಕಂಡಿದ್ದು ಗಡಿನಾಡದ ಕಾಸರಗೋಡಿನ ಕೃಷ್ಣ ಥಿಯೇಟರ್ ನಲ್ಲೂ ಭರ್ಜರಿ ಪ್ರದರ್ಶನ ಕಾಣುತ್ತಿದ್ದು ಜನ‌ ಮನ್ನಣೆ ಗಳಿಸುತ್ತಿದೆ. ಸಿನಿಮಾ ಬಿಡುಗಡೆ ಸಂದರ್ಭ ಕಾಸರಗೋಡಿನ ಕೃಷ್ಣ ಥಿಯೇಟರ್ ನಲ್ಲಿ ನಡೆದ ಸಮಾರಂಭವನ್ನು ಪದ್ಮಶ್ರೀ ಸತ್ಯನಾರಾಯಣ ಬೇಳೆರಿ ದೀಪ ಬೆಳಗಿಸಿ ಉದ್ಘಾಟಿಸಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ.ಜಯಪ್ರಕಾಶ್ ನಾರಾಯಣ ತೊಟ್ಟೆತ್ತೊಡಿ, ಗೋವಿಂದ ಪೈ ಸ್ಮಾರಕ ಸಮಿತಿ ಕಾರ್ಯದರ್ಶಿ ಉಮೇಶ್ ಸಾಲಿಯಾನ್ ಕಾಸರಗೋಡು,ಧಾರ್ಮಿಕ ಮುಂದಾಳುಗಳಾದ ಶ್ರೀಕೃಷ್ಣ ಶಿವಕೃಪಾ, ಕೆ.ಎನ್.ವೆಂಕಟ್ರಮಣ ಹೊಳ್ಳ,ಅಶ್ವತ್ಥ್ ಪೂಜಾರಿ ಲಾಲ್ ಭಾಗ್ , ಹರೀಶ್ ಕಡಂಬಾರ್,ಅಖಿಲೇಷ್ ನಗುಮುಗಂ, ಮಂಗಲ್ಪಾಡಿ ಗ್ರಾಮ ಪಂಚಾಯತ್ ಸದಸ್ಯ ವಸಂತ್ ಮಯ್ಯ ತಿಂಬರ,ಕರಾವಳಿ ಗಾಯನ ಪರಿಷತ್ ನ‌ ಕಾರ್ಯದರ್ಶಿ ಕೇಶವ ಕನಿಲ, ಕುಂಬ್ಡಾಜೆ ಪಂ.ಸದಸ್ಯ ಹರೀಶ್ ಗೋಸಾಡ, ರಾಜ್ ಕುಮಾರ್ , ಸುಜಾತ, ವಿಶಾಲಾಕ್ಷ ಪುತ್ರಕಳ, ಸಂಯೋಜಕ ರತನ್ ಕುಮಾರ್ ಹೊಸಂಗಡಿ ಮೊದಲಾದವರು ಉಪಸ್ಥಿತರಿದ್ದರು. ಜಯ ಮಣಿಯಂಪಾರೆ ಸ್ವಾಗತಿಸಿ ನಿರೂಪಿಸಿದರು‌. ಸಹ ನಿರ್ಮಾಪಕಿ ಅರುಣಾಕ್ಷಿ ಗಟ್ಟಿ ಕುಂಬಳೆ ವಂದಿಸಿದರು.
ಮಂಗಳೂರು: ಪಿ.ಎನ್.ಆರ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ ಪುಷ್ಪರಾಜ್ ರೈ ಮಲಾರಬೀಡು ನಿರ್ದೇಶನದ "ಆರಾಟ" ಕನ್ನಡ ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಬಿಡುಗಡೆಗೊಂಡಿತು. ಶಾಸಕ ರಾಜೇಶ್ ನಾಯ್ಕ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಆರಾಟ ಕನ್ನಡ ಸಿನಿಮಾ ನಮ್ಮ ಸಂಸ್ಕೃತಿಯನ್ನು, ನಮ್ಮ ಪರಂರೆಯನ್ನು ಬಿಂಬಿಸುವ ಸಿನಿಮಾ ಆಗಿದೆ. ಸಿನಿಮಾವನ್ನು ಎಲ್ಲರೂ ವೀಕ್ಷಿಸಿ ಪ್ರೋತ್ಸಾಹಿಸ ಬೇಕೆಂದರು. ಮುಖ್ಯ ಅತಿಥಿ ಕಟೀಲು ಯಕ್ಷಗಾನ‌ ಮೇಳದ ಮುಖ್ಯಸ್ಥ ದೇವಿಪ್ರಸಾದ್ ಶೆಟ್ಟಿ ಶುಭಹಾರೈಸಿದರು. ಸಮಾರಂಭದಲ್ಲಿ ಶಿವ ಪ್ರಸಾದ್ ಕಂಡೆಲ್ ಕಾರ್, ಶಿವಪ್ರಸಾದ್ಆಳ್ವ, ವಿಜಯಕುಮಾರ್ ಕೊಡಿಯಾಲ್ ಬೈಲ್, ಪ್ರಕಾಶ್ ಪಾಂಡೇಶ್ವರ್, ರವಿ ರೈ ಕಳಸ, ಜಗನ್ ಪವಾರ್ ಬೇಕಲ್, ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ, ತಮ್ಮ ಲಕ್ಷಣ, ಸಂತೋಷ್ ಶೆಟ್ಟಿ ಕುಂಬ್ಳೆ, ಶ್ರೀಕಾಂತ್ ಶೆಟ್ಟಿ, ಜ್ಯೋತಿಷ್ ಶೆಟ್ಟಿ, ಸುನಿಲ್ ನೆಲ್ಲಿಗುಡ್ಡೆ, ಅನಿಲ್ ಉಪ್ಪಳ, ಪುಷ್ಪರಾಜ್ ರೈ, ರಾಘವೇಂದ್ರ ಹೊಳ್ಳ, ಮಲ್ಲಿಕಾಪ್ರಸಾದ್, ದಿನೇಶ್ ಶೆಟ್ಟಿ ಮಲಾರಬೀಡು, ರಾಮ್ ಪ್ರಸಾದ್,ಭಾಸ್ಕರ ಚಂದ್ರ ಶೆಟ್ಟಿ, ಕಿರಣ್ ಶೆಟ್ಟಿ, ಪ್ರೇಮ್ ಶೆಟ್ಟಿ ಸುರತ್ಕಲ್, ಉದಯ ಶೆಟ್ಟಿ ಇಡ್ಯಾ, ಅನಿಲ್ ರಾಜ್ ಮೊದಲಾದವರು ಉಪಸ್ಥತರಿದ್ದರು. ಲಕ್ಷ್ಮೀಶ ಸುವರ್ಣ ಕಾರ್ಯಕ್ರಮ ನಿರ್ವಹಿಸಿದರು. ಆರಾಟ ಸಿನಿಮಾ ಮಂಗಳೂರಿನಲ್ಲಿ ಭಾರತ್ ಸಿನಿಮಾಸ್, ಪಿ.ವಿ.ಆರ್, ಸಿನಿಪೊಲಿಸ್, ಮಣಿಪಾಲದಲ್ಲಿ ಐನಾಕ್ಸ್, ಭಾರತ್ ಸಿನಿಮಾಸ್, ಪಡುಬಿದ್ರೆಯಲ್ಲಿ ಭಾರತ್ ಸಿನಿಮಾಸ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್ , ಕುಂದಾಪುರದಲ್ಲಿ ಭಾರತ್ ಸಿನಿಮಾಸ್, ಉಡುಪಿಯಲ್ಲಿ ಭಾರತ್ ಸಿನಿಮಾಸ್, ಸುರತ್ಕಲ್ ಸಿನಿಗ್ಯಾಲಕ್ಸಿ, ಕಾಸರಗೋಡು ಸಿನಿಕೃಷ್ಣ ಮುಂತಾದ ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಕಂಡಿದೆ. ಅರಾಟ ಚಿತ್ರದಲ್ಲಿ ಗಡಿನಾಡಿನ ಸಚಿತ್ರಣ. "ಕರ್ನಾಟಕ ಮತ್ತು ಕೇರಳ ರಾಜ್ಯದ ಗಡಿಭಾಗಗಳಾದ ಮುಡಿಪು, ಆನೇಕಲ್ಲು, ಉಪ್ಪಳ, ಮಂಗಲ್ಪಾಡಿ ಹಾಗೂ ಕುಬಣೂರು ಪರಿಸರದಲ್ಲಿ ಸಿನಿಮಾ ಚಿತ್ರೀಕರಣಗೊಂಡಿ ಸುಮಾರು 20 ದಿನಗಳ ಚಿತ್ರೀಕರಣ ಎರಡು ಹಂತಗಳಲ್ಲಿ ನಡೆದಿತ್ತು. ಊರಿನ ದುರ್ಗಾಪರಮೇಶ್ವರಿ ದೇವರು ಉತ್ಸವ ಮುಗಿಸಿ ಜಳಕಕ್ಕಾಗಿ ನದಿ ದಂಡೆಯಲ್ಲಿರುವ ಪಕ್ಕದ ಊರಿಗೆ ಬರುವುದು ವಾಡಿಕೆ. ಆರಾಟಕ್ಕೆ ಬರುವ ದಾರಿಯಲ್ಲಿ ಕಟ್ಟೆಯಲ್ಲಿ ಪೂಜೆ ಆಗಿಯೇ ದೇವರು ಜಳಕವನ್ನಾಡುವರು. ಕಾಲಕ್ರಮೇಣ ಕಟ್ಟೆಯು ನಿರ್ಲಕ್ಷ್ಯಕ್ಕೊಳಗಾಗಿ ಕಟ್ಟೆಯ ಯಜಮಾನಿಕೆಯ ಮನೆತನಕ್ಕೆ ಬರುವ ನ್ಯಾಯ ಏನು, ಬೇಜವಾಬ್ದಾರಿ ತಂದೆಯ ಮನೆಯಲ್ಲಿ ಆಗುವ ಅನಾಹುತಗಳೇನು ಪ್ರಾಮಾಣಿಕವಾಗಿ ದೇವರನ್ನು ನಂಬಿದರೆ ನಮ್ಮ ಕಷ್ಟ ಕಾಲಕ್ಕೆ ದೇವರು ಯಾವ ರೀತಿ ಸಹಾಯ ಮಾಡುತ್ತಾರೆ ಇದೆಲ್ಲದಕ್ಕೂ ಉತ್ತರವನ್ನು "ಆರಾಟ" ಸಿನಿಮಾದಲ್ಲಿ ನೋಡಬಹುದು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Namma Manjeswara Official Whatsapp Group 2

Qries

Advertisement

Qries Qries Qries Qries Qries Qries Qries

News

Advt

Advertisement

Qries Qries Qries