Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580. Qries Qries Qries Qries Qries

ಉತ್ತಮ ಸಂಸ್ಕಾರದಿಂದ ದುಶ್ಚಟದಿಂದ ದೂರ ಉಳಿಯಬಹುದು - ಶ್ರೀ ಗಣೇಶ್ ಆಚಾರ್ಯ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕುಂಬ್ಳೆ ಕಂಚಿಕಟ್ಟೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ.

ಉತ್ತಮ ಸಂಸ್ಕಾರದಿಂದ ದುಶ್ಚಟದಿಂದ ದೂರ ಉಳಿಯಬಹುದು: ಶ್ರೀ ಗಣೇಶ್ ಆಚಾರ್ಯ.
ಕುಂಬಳೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಮಂಜೇಶ್ವರ ತಾಲ್ಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ಇವರ ಸಹಯೋಗದಲ್ಲಿ ಕುಂಬ್ಳೆ ಕಂಚಿಕಟ್ಟೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಪ್ರಯುಕ್ತ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ಆಯೋಜನೆ ಮಾಡಲಾಯಿತು. ಜನ ಜಾಗೃತಿ ಪ್ರಾದೇಶಿಕ ಯೋಜನಾಧಿಕಾರಿ ಗಣೇಶ್ ಆಚಾರ್ಯರವರು ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕೆ ತಾಯಿ ತಂದೆ ಹೇಗೆ ಮಕ್ಕಳಿಗೆ ಸಂಸ್ಕಾರ ನೀಡಬೇಕು ಹಾಗೂ ಪೂಜ್ಯರು ಸಮಾಜಕ್ಕೆ ನೀಡುತ್ತಿರುವ ಕಾರ್ಯಕ್ರಮಗಳ ಬಗ್ಗೆ ಮನ ಮುಟ್ಟುವಂತೆ ಮಾಹಿತಿ ನೀಡಿದರು. ಜನಜಾಗೃತಿ ಕಾಸರಗೋಡು ಜಿಲ್ಲಾ ನಿಕಟಪೂರ್ವ ಅಧ್ಯಕ್ಷರಾದ ಅಶ್ವಥ್ ಪೂಜಾರಿ ಲಾಲ್ ಬಾಗ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ,ಯೋಜನೆಯಿಂದ ಸಮಾಜದ ಕಟ್ಟಕಡೆಯ ಕುಟುಂಬ ಅಭಿವೃದ್ಧಿ ಹೊಂದಿರುವ ಬಗ್ಗೆ ಮಾರ್ಮಿಕವಾಗಿ ಮಾತಾಡಿದರು.
ಕಾರ್ಯಕ್ರಮದಲ್ಲಿ ಮಹಾದೇವ ನವಜೀವನ ಸಮಿತಿ ಉಪಾಧ್ಯಕ್ಷರಾದ ನಾರಾಯಣ ರವರು ಅನಿಸಿಕೆ ವ್ಯಕ್ತ ಪಡಿಸಿದರು. ಕುಂಬ್ಳೆ ವಲಯ ಅಧ್ಯಕ್ಷರಾದ ಶ್ರೀಮತಿ ಕಸ್ತೂರಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮೇಲ್ವಿಚಾರಕರಾದ ರಮೇಶ್, ರುತೇಶ್, ಮೋಹನ್, ನಾರಾಯಣ ಉಪಸ್ಥಿತರಿದ್ದರು. ಸೇವಾಪ್ರತಿನಿಧಿ ಶ್ರೀಮತಿ ಸಂಧ್ಯಾ ಸ್ವಾಗತಿಸಿ, ಸುಜಾತಾ ವಂದಿಸಿದರು. ಶ್ರೀಮತಿ ಪುಷ್ಪಲತಾ ಪುರುಷೋತ್ತಮ್ ಆಚಾರ್ ಕಾರ್ಯಕ್ರಮ ನಿರೂಪಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Namma Manjeswara Official Whatsapp Group 2

Qries

Advertisement

Qries Qries Qries Qries Qries Qries Qries

News

Advt

Advertisement

Qries Qries Qries