Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580. Qries Qries Qries Qries Qries

ಸಂತಡ್ಕ ಶ್ರೀ ಅರಸು ಸಂಕಲ ದೈವ ಕ್ಷೇತ್ರದಲ್ಲಿ ನಾಳೆಯಿಂದ ಮೊದಲ್ಗೊಂಡು ಈ ತಿಂಗಳ 24 ರವರೆಗೆ ಶ್ರೀ ಕ್ಷೇತ್ರ ಸಂತಡ್ಕ ಮಾಡದ ಶ್ರೀ ದೈವಗಳ ಪುನ‌ರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ.

ಸಂತಡ್ಕ ಶ್ರೀ ಅರಸು ಸಂಕಲ ದೈವ ಕ್ಷೇತ್ರದಲ್ಲಿ ನಾಳೆ(19-01-2025 ರಿಂದ) ಯಿಂದ ಮೊದಲ್ಗೊಂಡು ಈ ತಿಂಗಳ 24-01-2025 ರವರೆಗೆ ಶ್ರೀ ಕ್ಷೇತ್ರ ಸಂತಡ್ಕ ಮಾಡದ ಶ್ರೀ ದೈವಗಳ ಪುನ‌ರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ.
ಮಂಜೇಶ್ವರ: ಶ್ರೀ ಅರಸು ಸಂಕಲ ದೈವ ಕ್ಷೇತ್ರ ಸಂತಡ್ಕದಲ್ಲಿ ನಾಳೆ(19-01-2025 ರಿಂದ) ಯಿಂದ ಮೊದಲ್ಗೊಂಡು ಈ ತಿಂಗಳ 24-01-2025 ರ ಶುಕ್ರವಾರದ ವರೆಗೆ ಶ್ರೀ ಕ್ಷೇತ್ರ ಸಂತಡ್ಕ ಮಾಡದ ಶ್ರೀ ದೈವಗಳ ಪುನ‌ರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವವು ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠ ಇವರ ಮಾರ್ಗದರ್ಶನದಲ್ಲಿ ಕ್ಷೇತ್ರ ತಂತ್ರಿಗಳಾದ ಬ್ರಹ್ಮಶ್ರೀ ವೇದಮೂರ್ತಿ ನರಸಿಂಹ ತಂತ್ರಿಗಳು ಕುಡುಪು ಹಾಗೂ ಶ್ರೀ ಯೋಗೀಶ ಕಲ್ಯಾಣತ್ತಾಯ ಕುಳೂರು ಇವರ ನೇತೃತ್ವದಲ್ಲಿ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರಗಲಿರುವುದು ಎಂದು ಶ್ರೀ ಅರಸು ಸಂಕಲ ದೈವ ಕ್ಷೇತ್ರ ಆಡಳಿತ ಟ್ರಸ್ಟ್, ಮತ್ತು ಸೇವಾ ಸಮಿತಿ ಅಧ್ಯಕ್ಷರಾದ ಡಾ. ಎಂ ಶ್ರೀಧರ ಭಟ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಆ ಪ್ರಯುಕ್ತ ನಾಳೆ 19 ರಂದು ಆದಿತ್ಯವಾರ ಸಂಜೆ ಗಂಟೆ 3 ರಿಂದ ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಬಳಿಕ ಸಂಜೆ ಗಂಟೆ 6 ರಿಂದ ಧಾರ್ಮಿಕ ಸಭೆ ನಡೆಯಲಿದ್ದು, ಶ್ರೀ ಧಾಮ ಮಾಣಿಲದ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹಾಗೂ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ ಮತ್ತು ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ಧರ್ಮದರ್ಶಿ ಶ್ರೀ ಕೃಷ್ಣ ಗುರೂಜಿ ಆಶೀರ್ವಚನ ನೀಡಲಿರುವರು. ಸಂತಡ್ಕ ಶ್ರೀ ಅರಸು ಸಂಕಲ ದೈವ ಕ್ಷೇತ್ರ ಆಡಳಿತ ಟ್ರಸ್ಟ್ ನ ಅಧ್ಯಕ್ಷರಾದ ಡಾ. ಎಂ ಶ್ರೀಧರ ಭಟ್ ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು. ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ಶ್ರೀ ಟಿ. ಶ್ಯಾಮ್ ಭಟ್, ಐಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೆಸರರಾದ ಶ್ರೀ ನಾರಾಯಣ ಹೆಗ್ಡೆ ಕೋಡಿಬೈಲು ಮುಂಡಪಳ್ಳ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀ ಕೆ.ಕೆ ಶೆಟ್ಟಿ, ಮೀಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಂದರಿ ಆರ್. ಶೆಟ್ಟಿ ಮುಖ್ಯ ಅತಿಥಿಗಳಾಗಿ, ಕೇರಳ ತುಳು ಅಕಾಡಮಿ ಅಧ್ಯಕ್ಷ ಕೆ.ಆರ್ ಜಯಾನಂದ, ಧಾರ್ಮಿಕ ಮುಂದಾಳು ಶ್ರೀ ಮಂಜುನಾಥ್ ಆಳ್ವ ಮದ್ವ, ವರ್ಕಾಡಿ ಶ್ರೀ ಮಡಿಕತ್ತಾಯ ಕ್ಷೇತ್ರದ ಗಡಿ ಪ್ರಧಾನರಾದ ಶ್ರೀ ದೇವಪ್ಪ ಮಾಸ್ಟರ್ ಚಾವಡಿಬೈಲು, ಮುಳಿಂಜ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಶ್ರೀ ಹರಿನಾಥ ಭಂಡಾರಿ ಮುಳಿಂಜ, ಧಾರ್ಮಿಕ ಮುಂದಾಳು ಶ್ರೀ ಗೋಪಾಲ ಶೆಟ್ಟಿ ಅರಿಬೈಲು, ಕಾಸರಗೋಡು ಜಿಲ್ಲಾ ವಿದ್ಯಾಧಿಕಾರಿ ಶ್ರೀ ದಿನೇಶ್.ವಿ, ಮಂಗಳೂರು ನ್ಯಾಯವಾದಿ ಶ್ರೀ ಹರಿಶ್ಚಂದ್ರ ಶೆಟ್ಟಿಗಾರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಂಜೇಶ್ವರ ತಾಲೂಕು ಯೋಜನಾಧಿಕಾರಿ ಶ್ರೀಮತಿ ಶಶಿಕಲಾ ಸುವರ್ಣ, ಮಂಜೇಶ್ವರ ಎ.ಇ ಆಫೀಸ್ ಹಿರಿಯ ಮೇಲ್ವಿಚಾರಣಾಧಿಕಾರಿ ಶ್ರೀ ಜಿತೇಂದ್ರ, ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಉಪನ್ಯಾಸಕ ಶ್ರೀ ವೇಣುಗೋಪಾಲ ಶೆಟ್ಟಿ, ಧಾರ್ಮಿಕ ಮುಂದಾಳು ಶ್ರೀ ಬಾಬು ಪಚ್ಚಂಪಾರೆ, ಉದ್ಯಮಿ ಶ್ರೀ ಜಗದೀಶ್ ಸುವರ್ಣ ಬೇಕೂರು, ಮೀಯಪದವು ಶ್ರೀ ಅಯ್ಯಪ್ಪ ಭಜನಾ ಮಂದಿರದ ಅಧ್ಯಕ್ಷ ಶ್ರೀಧರ ರಾವ್ ಆರ್ ಎಂ, ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಕಮಲಾಕ್ಷಿ ಕೆ. ಪಾವೂರು, ಉದ್ಯಾವರ ಮಾಡ ಶ್ರೀ ಅರಸು ಮಂಜೀಷ್ಣಾರ್ ದೈವಗಳ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಕಿರಣ್ ಶೆಟ್ಟಿ ಮಾಡ, ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯೆ ಶ್ರೀಮತಿ ಅಶ್ವಿನಿ ಎಂ.ಎಲ್ ಪಜ್ವ, ಮೀಂಜ ಗ್ರಾಮ ಪಂಚಾಯತ್ ಸದಸ್ಯ ಜನಾರ್ದನ ಪೂಜಾರಿ ಕುಳೂರು ಅತಿಥಿಗಳಾಗಿರುವರು. ರಾತ್ರಿ 8.30 ರಿಂದ ಟೀಮ್ ಗರುಡ ಸಂತಡ್ಕ ಪ್ರಾಯೋಜಕತ್ವದಲ್ಲಿ ಸ್ಥಳೀಯ ಪ್ರತಿಭೆಗಳ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ. 20 ರಂದು ಸೋಮವಾರ ಬೆಳಗ್ಗೆ 10 ರಿಂದ ದೇವತಾ ಪ್ರಾರ್ಥನೆ, ಆಲಯ ಪರಿಗ್ರಹ, ಗಣಪತಿ ಹೋಮ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಮಧ್ಯಾಹ್ನ ಗಂಟೆ 12.30 ರಿಂದ ಅನ್ನ ಸಂತರ್ಪಣೆ, ಸಂಜೆ ಗಂಟೆ 6 ರಿಂದ ಪುಣ್ಯಾಹ, ಪ್ರಾಸಾದ ಶುದ್ದಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಬಲಿ, ರಾತ್ರಿ ಗಂಟೆ 8 ರಿಂದ ಅನ್ನ ಸಂತರ್ಪಣೆ ನಡೆಯಲಿದೆ. ಸಾಂಸ್ಕತಿಕ ಕಾರ್ಯಕ್ರಮದಂಗವಾಗಿ ರಾತ್ರಿ ಗಂಟೆ 7.00 ರಿಂದ ವಿಜಯ ಫ್ರೆಂಡ್ಸ್ ಕ್ಲಬ್ ಸಂತಡ್ಕ ಪ್ರಾಯೋಜಕತ್ವದಲ್ಲಿ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಮೇಳದವರಿಂದ "ಸಮಗ್ರ ಭೀಷ್ಮ" ಕಥಾ ಪ್ರಸಂಗದ ಯಕ್ಷಗಾನ ಬಯಲಾಟ ನಡೆಯಲಿದೆ. 21 ರಂದು ಮಂಗಳವಾರ ಪ್ರಾತಃ ಗಂಟೆ 8 ರಿಂದ ಪ್ರಾಯಶ್ಚಿತ್ತ ಹೋಮ, ಶಾಂತಿ ಹೋಮ, ಅನುಜ್ಞಾಕಲಶಾಭಿಷೇಕ, ಶ್ರೀ ದೈವಗಳ ಭಂಡಾರ ಆಗಮನ, ಬಿಂಬ ಶುದ್ದಿ ಕಲಶ, ಮಧ್ಯಾಹ್ನ ಗಂಟೆ 12.30 ರಿಂದ ಅನ್ನ ಸಂತರ್ಪಣೆ, ಸಂಜೆ 4 ರಿಂದ ವಾಗ್ದೇವಿ ಯಕ್ಷಗಾನ ಕಲಾ ಸಂಘ ಮೂಡಂಬೈಲು ಇವರಿಂದ ತಾಳಮದ್ದಳೆ, ಸಂಜೆ ಗಂಟೆ 6 ರಿಂದ ಧ್ಯಾನಾಧಿವಾಸ, ಕಲಶಾಧಿವಾಸ, ಅಧಿವಾಸ ಹೋಮಗಳು ನಡೆಯಲಿದೆ. ಸಂಜೆ ಗಂಟೆ 7 ರಿಂದ ಮಾತೃ ಸಂಗಮ ನಡೆಯಲಿದ್ದು, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನ ಸಾದ್ವಿ ಶ್ರೀ ಮಾತಾನಂದಮಯೀ ಆಶೀರ್ವಚನ ನೀಡಲಿರುವರು. ಶ್ರೀಮತಿ ಪಾರ್ವತಿ ಶ್ರೀಧರ ಭಟ್ ಮಾವೆ ಅಧ್ಯಕ್ಷತೆ ವಹಿಸುವರು. ದೈಗೋಳಿ ಸಾಯಿನಿಕೇತನ ಸೇವಾಶ್ರಮದ ಶ್ರೀಮತಿ ಡಾ. ಶಾರದಾ ಉದಯಕುಮಾರ್, ನಿವೃತ ಅಧ್ಯಾಪಿಕೆ ಶ್ರೀಮತಿ ಜಯಲಕ್ಷ್ಮಿ ಕಾರಂತ, ವಿಶ್ವ ಹಿಂದೂ ಪರಿಷತ್ ಮಾತೃಶಕ್ತಿ, ಕಣ್ಣೂರು ವಿಭಾಗ ಸಂಯೋಜಕಿ ಶ್ರೀಮತಿ ಮೀರಾ ಆಳ್ವ, ನಿವೃತ ಅಧ್ಯಾಪಿಕೆ ಶ್ರೀಮತಿ ಯಮುನಾ ಎ ಕುಂಬಳೆ, ಶ್ರೀಮತಿ ಮೀನಾಕ್ಷೀ ಸಿ.ಕೆ ಚಿಪ್ಪಾರ್ ಲಾಲ್‌ಬಾಗ್, ಶ್ರೀಮತಿ ರತ್ನಾವತಿ ಎಸ್ ಭಂಡಾರಿ ದಡ್ಡಂಗಡಿ, ವಿಶ್ವ ಹಿಂದೂ ಪರಿಷತ್ ಮಾತೃ ಮಂಡಳಿ ಸಂತಡ್ಕದ ಕಾರ್ಯದರ್ಶಿ ಶ್ರೀಮತಿ ಆಶಾಲತಾ ಅತಿಥಿಗಳಾಗಿರುವರು. ರಾತ್ರಿ ಗಂಟೆ 8 ರಿಂದ ಅನ್ನ ಸಂತರ್ಪಣೆ ನಡೆಯಲಿದೆ ಸಾಂಸ್ಕತಿಕ ಕಾರ್ಯಕ್ರಮದ ಅಂಗವಾಗಿ ರಾತ್ರಿ ಗಂಟೆ 9.00 ರಿಂದ ಶ್ರೀ ಅರಸು ಸಂಕಲ ಸೇವಾ ಬಳಗ ಸಂತಡ್ಕ ಪ್ರಾಯೋಜಕತ್ವದಲ್ಲಿ ಚಾ ಪರ್ಕ ಕಲಾವಿದೆರ್ ಕುಡ್ಲ ಇವರಿಂದ "ಏರ್ಲಾ ಗ್ಯಾರಂಟಿ ಅತ್ತ್" ತುಳು ನಾಟಕ ಪ್ರದರ್ಶನಗೊಳ್ಳಲಿದೆ.
22 ರಂದು ಬುಧವಾರ ಪ್ರಾತಃ ಗಂಟೆ 8 ರಿಂದ 8.30 ರ ಕುಂಭ ಲಗ್ನ ಸುಮುಹೂರ್ತದಲ್ಲಿ ಶ್ರೀ ಅರಸು ಸಂಕಲ, ಶ್ರೀ ಧೂಮಾವತಿ ಬಂಟ, ಶ್ರೀ ವ್ಯಾಘ್ರ ಚಾಮುಂಡಿ, ಶ್ರೀ ಕೊರತಿ - ಗುಳಿಗ ದೈವಗಳ ಪುನರ್ ಪ್ರತಿಷ್ಠಾಪನೆ ಕಲಶಾಭಿಷೇಕ, ತಂಬಿಲ ಮತ್ತು ಪ್ರಸನ್ನ ಪೂಜೆ ಮಧ್ಯಾಹ್ನ ಗಂಟೆ 12.30 ರಿಂದ ಅನ್ನ ಸಂತರ್ಪಣೆ, ಬೆಳಿಗ್ಗೆ ಗಂಟೆ 10.30 ರಿಂದ ಧಾರ್ಮಿಕ ಸಭೆ ನಡೆಯಲಿದ್ದು, ಎಡನೀರು ಶ್ರೀಮದ್ ಜಗದ್ಗುರು ಶ್ರೀಶಂಕರಾಚಾರ್ಯ ಸಂಸ್ಥಾನಂ ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ನ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ, ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮ ಮಠದ ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಆಶೀರ್ವಚನ ನೀಡಲಿರುವರು. ಕ್ಷೇತ್ರ ತಂತ್ರಿಗಳಾದ ಬ್ರಹ್ಮಶ್ರೀ ವೇದಮೂರ್ತಿ ನರಸಿಂಹ ತಂತ್ರಿಗಳು ಕುಡುಪು, ಬ್ರಹ್ಮಶ್ರೀ ವೇದಮೂರ್ತಿ ಅನಂತ ನಾರಾಯಣ ಭಟ್ ಪರಕ್ಕಜೆ, ಬ್ರಹ್ಮಶ್ರೀ ವೇದಮೂರ್ತಿ ರವೀಶ್ ತಂತ್ರಿಗಳು ಕುಂಟಾರು, ಗೌರವ ಉಪಸ್ಥಿತರಿರುವರು. ಸಂತಡ್ಕ, ಶ್ರೀ ಅರಸು ಸಂಕಲ ದೈವ ಕ್ಷೇತ್ರ ಆಡಳಿತ ಟ್ರಸ್ಟ್ ನ ಅಧ್ಯಕ್ಷ ಡಾ. ಶ್ರೀಧರ ಭಟ್, ಅಧ್ಯಕ್ಷತೆ ವಹಿಸಲಿರುವರು. ಮುಂಬೈ ಉದ್ಯಮಿ ಶ್ರೀ ಕುಸುಮೋದರ ಡಿ ಶೆಟ್ಟಿ, ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮುಖ್ಯ ಅತಿಥಿಗಳಾಗಿರುವರು. ಉದ್ಯಾವರ ಮಾಡ ಶ್ರೀ ಅರಸು ಮಂಜೀಷ್ಣಾರ್ ದೈವಸ್ಥಾನದ ಅಣ್ಣ ದೈವದ ಪಾತ್ರಿ ಶ್ರೀ ರಾಜ ಬೆಳ್ಳಪ್ಪಾಡರು, ನಿವೃತ್ತ ಪ್ರಾಚಾರ್ಯ ಶ್ರೀ ಶಂಕರ ನಾರಾಯಣ ಭಟ್ ಬಜಾಲ್, ಕರ್ನಾಟಕ ಸರಕಾರ ಧಾರ್ಮಿಕ ದತ್ತಿ ಇಲಾಖೆ ಸದಸ್ಯ ಶ್ರೀಮತಿ ಮಲ್ಲಿಕಾ ಪಕಳ, ಕೇರಳ ಮಲಬಾರ್ ದೇವಸ್ವಂ ಬೋರ್ಡ್ ನ ಸದಸ್ಯ ಶ್ರೀ ಶಂಕರ ರೈ ಮಾಸ್ಟರ್, ಕ್ಯಾಂಪ್ಕೋ ನಿರ್ದೇಶಕ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದಕ್ಷಿಣ ಕನ್ನಡದ ಜಿಲ್ಲಾ ನಿರ್ದೇಶಕ ಶ್ರೀ ಪ್ರವೀಣ್ ಕುಮಾರ್, ಉದ್ಯಮಿ ಶ್ರೀ ಸಂತೋಷ್ ಕುಮಾರ್ ಬೋಳಿಯಾರ್, ಭಾರತ್ ಕೋ - ಆಪರೇಟಿವ್ ಬ್ಯಾಂಕ್ ಮುಂಬೈ ಅಧ್ಯಕ್ಷ ಶ್ರೀ ಸೂರ್ಯಕಾಂತ್ ಜಯ ಸಿ ಸುವರ್ಣ, ಸುಣ್ಣಾರಬೀಡು, ಬಲ್ಲಂಗುಡೇಲು ಶ್ರೀ ಪಾಡಾಂಗರೆ ಭಗವತೀ ಕ್ಷೇತ್ರದ ಜಯರಾಮ ಬಲ್ಲಂಗುಡೇಲು, ಚಿಪ್ಪಾರು ಅಮ್ಮೇರಿ ಗರಡಿಯ ಆಡಳಿತ ಮೊಕ್ತೆಸರ ಶ್ರೀ ಅಶೋಕ್ ಎಂ.ಸಿ, ಉದ್ಯಮಿ ಶ್ರೀಧರ ಶೆಟ್ಟಿ ಮುಟ್ಟಮ್, ಉಪ್ಪಳ ಶ್ರೀ ಅಯ್ಯಪ್ಪ ಭಜನಾ ಮಂದಿರ ಅಧ್ಯಕ್ಷ ಶ್ರೀ ಸತೀಶ ಶೆಟ್ಟಿ ಕುಡಾಲ್, ಕಡಂಬಾರ್ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಮೊಕ್ತೆಸರ ಶ್ರೀ ಎಸ್ ಎನ್ ಕಡಂಬಾರ್, ಉದ್ಯಮಿ ಶ್ರೀ ರಾಜೇಶ್ ಬಾಳೆಕಲ್ಲು, ಶ್ರೀ ಶ್ರೀಧರ ಶೆಟ್ಟಿ ಗುಬ್ಬ ಮೇಗಿನ ಗುತ್ತು, ಕುಂಜತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಶ್ರೀ ವಿಶ್ವನಾಥ ಶೆಟ್ಟಿ ಕುಂಜತ್ತೂರು, ಬ್ರಹ್ಮಶ್ರೀ ನಾರಾಯಣ ಗುರು ವೇದಿಕೆ ಕಾಸರಗೋಡು ಅಧ್ಯಕ್ಷ ಶ್ರೀ ಕೃಷ್ಣ ಶಿವಕೃಪಾ ಕುಂಜತ್ತೂರು, ಮಂಜೇಶ್ವರ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ಶ್ರೀ ಅನೂಪ್ ಕುಮಾರ್, ಸುರತ್ಕಲ್ ಸಬ್ ಇನ್ಸ್‌ಪೆಕ್ಟರ್ ಶ್ರೀ ಶಶಿಧರ ಶೆಟ್ಟಿ ಜಮ್ಮದಮನೆ, ದಡ್ಡಂಗಡಿ ಶ್ರೀ ಮಹಾವಿಷ್ಣು ಸೇವಾ ಟ್ರಸ್ಟ್ ಅಧ್ಯಕ್ಷ ಶ್ರೀ ಬಾಲಕೃಷ್ಣ ಭಂಡಾರಿ ದಡ್ಡಂಗಡಿ, ಕನಿಲ ಶ್ರೀ ಭಗವತಿ ಕ್ಷೇತ್ರ ಅಧ್ಯಕ್ಷ ಶ್ರೀ ವಿಶ್ವನಾಥ್‌ ಕುದ್ರು, ಶ್ರೀ ಬಾಲಕೃಷ್ಣ ದೀಕ್ಷಾ ವುಡ್ ಇಂಡಸ್ಟ್ರೀಸ್ ಕುಂಜತ್ತೂರು ಅಥಿತಿಗಳಾಗಿರುವರು. ಈ ವೇಳೆ ಕ್ಷೇತ್ರ ತಂತ್ರಿ ಬ್ರಹ್ಮಶ್ರೀ ವೇದಮೂರ್ತಿ ನರಸಿಂಹ ತಂತ್ರಿಗಳು ಕುಡುಪು ಇವರಿಗೆ ಸನ್ಮಾನ, ಕ್ಷೇತ್ರ ಶಿಲ್ಪಿ ಶ್ರೀ ಪ್ರಸನ್ನ ಮುಳಿಯಾಲ, ದೈವ ನರ್ತಕ ಶ್ರೀ ರಾಜೇಶ್ ಮಾರು, ಜ್ಯೋತಿಷಿ ಶ್ರೀ ಉಣ್ಣಿಕೃಷ್ಣನ್ ನಂಬೀಶನ್ ಇವರಿಗೆ ಗೌರವಾರ್ಪಣೆ ನಡೆಯಲಿದೆ. ಮಧ್ಯಾಹ್ನ ಸಾಂಸ್ಕೃತಿಕ ಕಾರ್ಯಕ್ರಮ ಲವಾನಂದ ಎಲಿಯಾಣ ಬಳಗದ ರಾಗ ಸಂಗೀತ ತಂಡದಿಂದ “ಭಕ್ತಿಗಾನ ಸುಧಾ" ಸಂಜೆ ಗಂಟೆ 5 ರಿಂದ ಶ್ರೀ ಕಲಾರತ್ನ ಶಂನಾಡಿಗ ಕುಂಬ್ಳೆ ಇವರಿಂದ ಹರಿಕಥೆ ನಡೆಯಲಿದೆ. ಪ್ರಾಯೋಜಕರು : ಶ್ರೀ ಈಶ್ವರ ನಾಯ್ಕ ಮತ್ತು ಮನೆಯವರು ಪಜಂಗಾರ್. ರಾತ್ರಿ ಗಂಟೆ 9.00 ರಿಂದ ತ್ರಿಶೂಲ್ ಫ್ರೆಂಡ್ಸ್ ಕ್ಲಬ್ ಬಾಳಿಯೂರು ಸಂತಡ್ಕ ಪ್ರಾಯೋಜಕತ್ವದಲ್ಲಿ ಬೆನಕ ಆರ್ಟ್ಸ್ ಕುಡ್ಲ ಕಲಾವಿದರಿಂದ ಪೊರಿಪುದಪ್ಪೆ ಜಲದುರ್ಗೆ ಪೌರಾಣಿಕ ತುಳು ನಾಟಕ ಪ್ರದರ್ಶನಗೊಳ್ಳಲಿದೆ. 23 ರಂದು ಗುರುವಾರ ಬೆಳಿಗ್ಗೆ ಗಂಟೆ 8 ರಿಂದ ಗಣಪತಿ ಹವನ ಶ್ರೀ ದೈವಗಳಿಗೆ ತಂಬಿಲ, ಬೆಳಿಗ್ಗೆ ಗಂಟೆ 11 ರಿಂದ ಶ್ರೀ ಅರಸು ಸಂಕಲ ಅಣ್ಣ ದೈವಗಳ ನೇಮೋತ್ಸವ, ಮಧ್ಯಾಹ್ನ ಗಂಟೆ 12.30 ರಿಂದ ಅನ್ನ ಸಂತರ್ಪಣೆ, ಮಧ್ಯಾಹ್ನ ಗಂಟೆ 1 ರಿಂದ ಶ್ರೀ ಗುರುನರಸಿಂಹ ಯಕ್ಷ ಬಳಗ ಮೀಯಪದವು ಇವರಿಂದ ತಾಳಮದ್ದಳೆ, ರಾತ್ರಿ ಗಂಟೆ 7 ರಿಂದ : ಶ್ರೀ ಅರಸು ಸಂಕಲ ತಮ್ಮ ದೈವಗಳ ನೇಮೋತ್ಸವ, ಒಲಸರಿ ಉತ್ಸವ, ರಾತ್ರಿ ಗಂಟೆ 9.00 ರಿಂದ ಶ್ರೀ ಅಯ್ಯಪ್ಪ ಭಜನಾ ಮಂದಿರ ಯಕ್ಷಗಾನ ತರಬೇತಿ ಕೇಂದ್ರ ಬಾಳಿಯೂರು ಇವರಿಂದ ಮಕ್ಕಳ ಯಕ್ಷಗಾನ ಬಯಲಾಟ, 24 ರಂದು ಶುಕ್ರವಾರ ಬೆಳಿಗ್ಗೆ ಗಂಟೆ 9 ರಿಂದ ಶ್ರೀ ದೈವಗಳಿಗೆ ತಂಬಿಲ, ಶ್ರೀ ವ್ಯಾಘ್ರ ಚಾಮುಂಡಿ ದೈವದ ನೇಮೋತ್ಸವ, ಮಧ್ಯಾಹ್ನ ಗಂಟೆ 12.30 ರಿಂದ ಅನ್ನ ಸಂತರ್ಪಣೆ, ಸಂಜೆ ಗಂಟೆ 5 ರಿಂದ ವಿಷ್ಣು ಬಳಗ ಮಜಿಬೈಲ್ ಇವರಿಂದ ತಾಳಮದ್ದಳೆ ನಡೆಯಲಿದೆ. ಸಂಜೆ 6 ರಿಂದ ಶ್ರೀ ಧೂಮಾವತಿ ಬಂಟ ದೈವಗಳ ನೇಮೋತ್ಸವ, ರಾತ್ರಿ ಗಂಟೆ 9 ರಿಂದ ಶ್ರೀ ಧೂಮಾವತಿ ಬಂಟ ದೈವಗಳ ಒಲಸರಿ ಉತ್ಸವ : ಶ್ರೀ ಕೊರತಿ ಗುಳಿಗ ದೈವಗಳ ಕೋಲೋತ್ಸವ, ರಾತ್ರಿ ಗಂಟೆ 12 ಕ್ಕೆ ಭಂಡಾರ ಇಳಿಯಲಿದೆ. ಎಂದು ಅವರು ತಿಳಿಸಿದ್ದಾರೆ.
ಈ ಬಗ್ಗೆ ಕರೆದ ಪತ್ರಿಕಾಗೋಷ್ಠಿಯಲ್ಲಿ ಕ್ಷೇತ್ರದ ಆಡಳಿತ ಸಮಿತಿ ಪದಾಧಿಕಾರಿಗಳಾದ ಶ್ರೀ ಅರಸು ಸಂಕಲ ದೈವ ಕ್ಷೇತ್ರ ಆಡಳಿತ ಟ್ರಸ್ಟ್ ಅಧ್ಯಕ್ಷರು ಡಾ.ಎಂ ಶ್ರೀಧರ ಭಟ್ ಉಪ್ಪಳ, ಉಪಾಧ್ಯಕ್ಷರು ಅರವಿಂದಾಕ್ಷ ಭಂಡಾರಿ ದಡ್ಡಂಗಡಿ, ಕೃಷ್ಣ ಶೆಟ್ಟಿ ಕಲ್ಲಾಯಿ, ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಸಂತಡ್ಕ, ಜಯಪ್ರಕಾಶ ಶೆಟ್ಟಿ ಅಂಗಡಿದಾರು, ನಾರಾಯಣ ಭಂಡಾರಿ, ಸಾಹಿತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Namma Manjeswara Official Whatsapp Group 2

Qries

Advertisement

Qries Qries Qries Qries Qries Qries Qries

News

Advt

Advertisement

Qries Qries Qries