Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580. Qries Qries Qries Qries Qries

ಕಾಸರಗೋಡು ಜಿಲ್ಲಾ ಕುಲಾಲ ಸಮುದಾಯ ಭವನದ ಮಿನಿ ಸಭಾಂಗಣದ ಉದ್ಘಾಟನೆ, ಉಚಿತ ಪುಸ್ತಕ ವಿತರಣೆ, ಸಹಾಯ ಹಸ್ತ ವಿತರಣೆ, ವಾರ್ಷಿಕ ಮಹಾಸಭೆ.

ಕಾಸರಗೋಡು ಜಿಲ್ಲಾ ಕುಲಾಲ ಸಮುದಾಯ ಭವನದ ಮಿನಿ ಸಭಾಂಗಣದ ಉದ್ಘಾಟನೆ, ಉಚಿತ ಪುಸ್ತಕ ವಿತರಣೆ, ಸಹಾಯ ಹಸ್ತ ವಿತರಣೆ, ವಾರ್ಷಿಕ ಮಹಾಸಭೆ.
ಮಂಜೇಶ್ವರ:- ಕಾಸರಗೋಡು ಜಿಲ್ಲಾ ಕುಲಾಲ ಸಂಘ (ರಿ.) ಮಂಜೇಶ್ವರ, ತೂಮಿನಾಡು ಆಶ್ರಯದಲ್ಲಿ ಕಾಸರಗೋಡು ಜಿಲ್ಲಾ ಕುಲಾಲ ಸುಮುದಾಯ ಭವನದ ನೆಲ ಅಂತಸ್ತಿನಲ್ಲಿ ನಿರ್ಮಾಣಗೊಂಡಿರುವ ಮಿನಿ ಸಭಾಂಗಣದ ಉದ್ಘಾಟನೆಯು ಮೇ 25 ರಂದು ಜರಗಿತು. ಸಮುದಾಯದ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಉಚಿತ ಪುಸ್ತಕ ವಿತರಣೆ, 2024-25 ರ ಸಾಲಿನ ಎಸ್. ಎಸ್. ಎಲ್. ಸಿ ಹಾಗೂ ಪ್ಲಸ್ ಟು /ಪಿ. ಯು. ಸಿ ಯ ಕರ್ನಾಟಕ ಕೇರಳ ಪರೀಕ್ಷೆ ಯಲ್ಲಿ ಅತ್ಯಧಿಕ ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ,ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ, ಸಹಾಯಹಸ್ತ ವಿತರಣೆ ಕಾರ್ಯಕ್ರಮ ಮತ್ತು ಸಂಘದ ವಾರ್ಷಿಕ ಮಹಾಸಭೆಯು ಜರಗಿತು. ಬೆಳಗ್ಗೆ ಗಣಹೋಮ, ಬಳಿಕ ಶ್ರೀ ಬಾಲಾoಜನೇಯ ವ್ಯಾಯಾಮ ಶಾಲೆ ಭಜನಾ ತಂಡ ಮತ್ತು ಶ್ರೀ ಮಹಾಕಾಳಿ ಭಜನಾ ಮಂಡಳಿ ತೂಮಿನಾಡು ಇವರಿಂದ ಭಜನೆ ಹಾಗೂ ನಂದಗೋಕುಲ ಭಜನಾ ತಂಡ ತೂಮಿನಾಡು ತಂಡದಿಂದ ಕುಣಿತ ಭಜನೆ ನಡೆಯಿತು.
ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಶ್ರೀ ಧಾಮ ಮಾಣಿಲ ಆಶೀರ್ವಚನ ನೀಡಿದರು. ಕಾಸರಗೋಡು ಜಿಲ್ಲಾ ಕುಲಾಲ ಸಂಘದ ಅಧ್ಯಕ್ಷರಾದ ನ್ಯಾಯವಾದಿ ಶ್ರೀ ರವೀಂದ್ರ ಮುನ್ನಿಪ್ಪಾಡಿ ಅಧ್ಯಕ್ಷತೆಯನ್ನು ವಹಿಸಿ ಪ್ರಸ್ತಾವನೆಯೊಂದಿಗೆ ಗಣ್ಯರನ್ನು ಸ್ವಾಗತಿಸಿದರು.
ಶ್ರೀ ಪ್ರೇಮಾನಂದ ಕುಲಾಲ್ ಕೋಡಿಕಲ್ ಅಧ್ಯಕ್ಷರು, ಶ್ರೀ ವೀರನಾರಾಯಣ ಸೇವಾ ಟ್ರಸ್ಟ್ (ರಿ.) ಕುಲಶೇಖರ, ಮಂಗಳೂರು ಸಭಾಂಗಣವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀ ದಿವಾಕರ ಮೂಲ್ಯ ಮಾಲಕರು ಅಮೂಲ್ಯ ರಬ್ಬರ್ ಇಂಡಸ್ಟ್ರಿಸ್ ಮತ್ತು ಅಧ್ಯಕ್ಷರು ಕುಲಾಲ ಸಂಘ (ರಿ.) ಬೆಂಗಳೂರು, ಶ್ರೀ ಗಣೇಶ್ ಕುಲಾಲ್ ಮಾಲಕರು ಶ್ರೀ ಲಕ್ಶ್ಮೀ ಫರ್ನಿಚರ್ಸ್ & ಇಂಟೀರಿಯರ್ಸ್ ಮಂಗಳೂರು, ಶ್ರೀ ಅನಿಲ್ ದಾಸ್ ಆಡಳಿತ ನಿರ್ದೇಶಕರು ದಾಸ್ ಪ್ರಮೋಷನ್ಸ್ & ನರ್ಸಿಂಗ್ ಹೋಮ್ ಮಂಗಳೂರು, ಶ್ರೀಮತಿ ಕಮಲಾಕ್ಷೀ ವಿ ಕುಲಾಲ್ ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯರು, ಶ್ರೀಮತಿ ಜಯಂತಿ ಬದಿಯಡ್ಕ ಕಾಸರಗೋಡು ಬ್ಲಾಕ್ ಪಂಚಾಯತ್ ಸದಸ್ಯರು, ಶ್ರೀಮತಿ ಮಾಲತಿ ಪಿ ಮುಖ್ಯೋಪಾಧ್ಯಾಯಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕುಳೂರು, ಶ್ರೀ ಜಯಪ್ರಕಾಶ್ ಕೈರಂಗಳ ಮ್ಯಾನೇಜರ್ ಓಪರೇಷನ್ ವಿಭಾಗ ಎಂ. ಆರ್. ಪಿ. ಎಲ್, ಶ್ರೀ ಸುಂದರ ಕುಲಾಲ್ ಶಕ್ತಿ ನಗರ ಆಡಳಿತ ಮೊಕ್ತೇಸರರು ಶ್ರೀ ವೀರ ನಾರಾಯಣ ದೇವಸ್ಥಾನ ಕುಲಶೇಖರ, ಶ್ರೀ ದಾಮೋದರ ಅಶೋಕನಗರ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರು ಶ್ರೀ ವೀರ ನಾರಾಯಣ ದೇವಸ್ಥಾನ ಕುಲಶೇಖರ, ಶ್ರೀ ಸುರೇಶ್ ಕುಲಾಲ್ ಸಂಚಾಲಕರು ಜೀರ್ಣೋದ್ದಾರ ಸಮಿತಿ ಶ್ರೀ ವೀರನಾರಾಯಣ ದೇವಸ್ಥಾನ ಭಾಗವಹಿಸಿದರು. ಈ ಸಂದರ್ಭದಲ್ಲಿ ಸಾಧಕರಿಗೆ ಗೌರವಾರ್ಪಣೆ ನಡೆಯಿತು. ಸಾಧಕರಾದ ಕರಾಟೆ ಪಟು ಕು.ಸ್ವಾತಿ ಕೊಡಂಗೆ,ಯಕ್ಷಗಾನ ಕಲಾವಿದ ಶ್ರೀ ಜಯೇಂದ್ರ ಕುಲಾಲ್ ಕಿದೂರು, ಸಮಾಜ ಸೇವೆಗಾಗಿ ಶ್ರೀ ರಾಮ ಪ್ರಸಾದ್ ಯಸ್ ಮಂಗಳೂರು, ದೇಶ ಸೇವೆಗೆ ಶ್ರೀ ಪೂವಪ್ಪ ಕಡoಬಾರ್, ದೈವಾರಾದನೆ ಶ್ರೀ ಗೋಪಾಲ ಕೃಷ್ಣ ವಾಂತಿಚ್ಚಾಲ್, ಪ್ರಗತಿಪರ ಕೃಷಿಕ ಶ್ರೀ ಶೇಷ ಮೋಹನ್ ನೇರಪ್ಪಾಡಿ, SPC - ವಿದ್ಯಾರ್ಥಿ ಪೊಲೀಸ್ ಕೆಡೆಟ್ ನಲ್ಲಿ ಕೇರಳ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಕು. ರಶ್ಮಿತ. ಕೆ ತೂಮಿನಾಡು, ಕೇರಳ ರಾಜ್ಯ ಮಟ್ಟದ ಜೂನಿಯರ್ ಗರ್ಲ್ಸ್ ಕಬ್ಬಡಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಕು. ಸೃಷ್ಟಿ ಕುಂಜತ್ತೂರು ಇವರನ್ನು ಗೌರವಿಸಲಾಯಿತು. ಆಶಕ್ತಕುಟುಂಬಕ್ಕೆ ನೀಡುವ ಕುಲಾಲ ಆಸರೆಯ 7 ನೇ ಸಹಾಯ ಹಸ್ತ ಯೋಜನೆ ರೂಪಾಯಿ 15,000/- ಮೊತ್ತವನ್ನು ಕಿಡ್ನಿ ವೈಫಲ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಶ್ರೀ ಸುಂದರ ಮೂಲ್ಯ ಪೆರ್ಲ ರವರಿಗೆ ಮತ್ತು ಕುಲಾಲ ಆಸರೆಯ 8 ನೇ ಸಹಾಯ ಹಸ್ತ ಯೋಜನೆ ರೂಪಾಯಿ 15,000/- ಮೊತ್ತ ವನ್ನು ಕಿಡ್ನಿ ವೈಫಲ್ಯ ದಿಂದ ಚಿಕಿತ್ಸೆ ಪಡೆಯುತ್ತಿರುವ ದೇವದಾಸ್ ಮಂಜೇಶ್ವರ ಅಡ್ಕರವರಿಗೆ ಗಣ್ಯರ ಉಪಸ್ಥಿಯಲ್ಲಿ ಸ್ವಾಮೀಜಿಯವರು ಹಸ್ತಾಂತರಿಸಿದರು. ಸುಮಾರು 375 ಮಂದಿ ವಿದ್ಯಾರ್ಥಿಗಳಿಗೆ ಉಚಿತಪುಸ್ತಕ ವಿತರಿಸಲಾಯಿತು. 2024-25 ನೇ ಸಾಲಿನ ಪರೀಕ್ಷೆ ಗಳಲ್ಲಿ ಅತ್ಯಧಿಕ ಅಂಕಗಳಿಸಿರುವ ಕೇರಳ/ಕರ್ನಾಟಕ ದ ಎಸ್. ಎಸ್. ಎಲ್. ಸಿ ಯ 16 ಮಂದಿ ವಿದ್ಯಾರ್ಥಿಗಳಿಗೆ ಹಾಗೂ ಪ್ಲಸ್ ಟು /ಪಿ. ಯು. ಸಿ ಯ 5 ಮಂದಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು. ಶ್ರೀ ದಾಮೋದರ ಮಾಸ್ಟರ್ ಕಬ್ಬಿನಹಿತ್ಲು ಪ್ರಧಾನ ಕಾರ್ಯದರ್ಶಿ ಜಿಲ್ಲಾ ಕುಲಾಲ ಸಂಘ ಧನ್ಯವಾದ ಸಮರ್ಪಿಸಿ, ಯನ್.ಕೆ. ಕುಲಾಲ್ ಕಾರ್ಯಕ್ರಮ ನಿರೂಪಿಸಿದರು. ಮಹಾಸಭೆಯಲ್ಲಿ 2025-27 ನೇ ಸಾಲಿನ ನೂತನ ಕಾರ್ಯ ಕಾರಿ ಸಮಿತಿಯ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ನ್ಯಾಯವಾದಿ ಶ್ರೀ ರವೀಂದ್ರ ಮುನ್ನಿಪ್ಪಾಡಿ, ಉಪಾಧ್ಯಕ್ಷರಾಗಿ ಶ್ರೀ ರಾಮ ಉಜಿರೆ, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀ ದಾಮೋದರ ಮಾಸ್ಟರ್ ಕಬ್ಬಿನಹಿತ್ಲು, ಜತೆ ಕಾರ್ಯದರ್ಶಿ ಯಾಗಿ ಶ್ರೀ ಭೋಜ ಮಸ್ಟರ್ ಪಾವೂರು, ಕೋಶಾಧಿಕಾರಿಯಾಗಿ ಶ್ರೀ ಈಶ್ವರ್ ಕುಲಾಲ್ ಕಣ್ವತೀರ್ಥ, ಕ್ರೀಡಾಕಾರ್ಯದರ್ಶಿಯಾಗಿ ಶ್ರೀ ತಾರನಾಥ ಕಣ್ವತೀರ್ಥ, ಸಂಘಟನಾ ಸಂಚಾಲಕರಾಗಿ ಶ್ರೀ ಸುಧೀರ್ ರಂಜನ್ ದೈಗೋಳಿ ಹಾಗೂ ಶ್ರೀ ಜಯಂತ ಚಿಪ್ಪಾರ್, ಸೇವಾದಳಪತಿಗಳಾಗಿ ಶ್ರೀ ಪ್ರಸಾದ್ ತುಮಿನಾಡು ಹಾಗೂ ಸುರೇಶ್ ಕಣ್ವತೀರ್ಥ, ನ್ಯಾಯ ಸಲಹಾ ಮಂಡಳಿ ಸದಸ್ಯರಾಗಿ ಶ್ರೀ ಸೋಮಪ್ಪ ಸಾಲ್ಯಾನ್ ಕುಂಜತ್ತೂರು, ಶ್ರೀ ಬಾಲಕೃಷ್ಣ ಮುನ್ನಿಪ್ಪಾಡಿ, ಶ್ರೀ ವಿಶ್ವನಾಥ ಮಾಣಿಪ್ಪಾಡಿ ಹಾಗೂ ಇತರ 21 ಮಂದಿ ಸದಸ್ಯರು ಕಾರ್ಯಕಾರಿ ಸಮಿತಿಗೆ ಆಯ್ಕೆಯಾದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Namma Manjeswara Official Whatsapp Group 2

Qries

Advertisement

Qries Qries Qries Qries Qries Qries Qries

News

Advt

Advertisement

Qries Qries Qries